ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಯುವಕನ ಮೇಲೆ ಕಾಡಾನೆ ದಾಳಿ - ಆಲೂರು ತಾಲ್ಲೂಕಿನ ಹೊಲ್ಲಹಳ್ಳಿ ಗ್ರಾಮದಲ್ಲಿ ಘಟನೆ

ಹಾಸನ: ಜಮೀನಿನಲ್ಲಿ ಜೋಳ ಕಟಾವು ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿ ಯುವಕ ಗಾಯಗೊಂಡಿರುವ ಘಟನೆ ಆಲೂರು ತಾಲೂಕಿನ ಹೊಲ್ಲಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಗ್ರಾಮದ ಹೊರ ವಲಯದಲ್ಲಿನ ತಮ್ಮ ಜಮೀನಿನಲ್ಲಿ ಜೋಳ ಕಟಾವು ಮಾಡುತ್ತಿದ್ದ ವೇಳೆ ಹಿಂದೆಯಿಂದ ಬಂದ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಎಡವಿ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. 25 ವರ್ಷದ ಮಲ್ಲಿಕಾರ್ಜುನ್ ಗಾಯಗೊಂಡ ಯುವಕನಾಗಿದ್ದು ಗಾಯಾಳುವನ್ನು ಹಾಸನ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Edited By : Vinayak Patil
PublicNext

PublicNext

15/10/2024 03:11 pm

Cinque Terre

16.29 K

Cinque Terre

0