ಚಿತ್ರದುರ್ಗ : ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ, ನಾಳೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ. ಈ ಕುರಿತು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮುಖಂಡ ಕೆ.ಟಿ.ಶಿವಕುಮಾರ್ ಮಾತ್ನಾಡಿ ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮೀನಾಮೇಷ ಏಣಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ, ನಾಳೆ ಚಿತ್ರದುರ್ಗದಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ನಗರದ ನೀಲಕಂಠೇಶ್ವರ ದೇವಾಲಯದಿಂದ ರ್ಯಾಲಿ ಆರಂಭವಾಗಿ, ಜಿಲ್ಲಾಧಿಕಾರಿ ಕಚೇರಿವರೆಗೂ ಕೂಡಾ ನಡೆಸಲಾಗುತ್ತಿದೆ ಎಂದರು. ಈ ವೇಳೆ ಮುಖಂಡ ಎಂ.ಶಿವಮೂರ್ತಿ, ಕೆ.ರಾಜಣ್ಣ, ಪ್ರಕಾಶ್ ಬೀರಾವರ ಸೇರಿ ಹಲವರಿದ್ದರು.
PublicNext
15/10/2024 03:34 pm