ಚಿಕ್ಕೋಡಿ: ಜಿಲ್ಲಾಡಳಿತ ಸೀಜ್ ಮಾಡಿರುವ ಖಾಸಗಿ ತರಕಾರಿ ಮಾರುಕಟ್ಟೆ ಆರಂಭಕ್ಕೆ ಒತ್ತಾಯಿಸಿ ವಿವಿಧ ಕನ್ನಡ ಸಂಘಟನೆಗಳಿಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಪಟ್ಟಣದ ವಿವಿಧ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.ವಿವಿಧ ಕನ್ನಡಪರ ಸಂಘಟನೆ ಹಾಗೂ ವ್ಯಾಪಾರಿಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ರೈತ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಜಿಲ್ಲಾಡಳಿತ ಖಾಸಗಿ ತರಕಾರಿ ಮಾರುಕಟ್ಟೆ ಬಂದ್ ಮಾಡಿದ್ದರು.
ಖಾಸಗಿ ಮಾರುಕಟ್ಟೆ ಬಂದ್ ಮಾಡಿ APMC ಯಲ್ಲಿ ತರಕಾರಿ ಮಾರುಕಟ್ಟೆ ಸ್ಥಾಪನೆ ಮಾಡಲಾಗಿತ್ತು.ಜಿಲ್ಲಾಡಳಿತದ ನಿರ್ಧಾರದಿಂದ ಸಂಕೇಶ್ವರ ಪಟ್ಟಣದ ಆದಾಯ ಕಡಿಮೆಯಾಗಿದೆ.APMC ಯಲ್ಲಿ ಮಾರುಕಟ್ಟೆ ವ್ಯವಸ್ಥೆ ಇಲ್ಲದ ರೈತರು ತಮ್ಮ ತರಕಾರಿಗಳನ್ನು ಮಹಾರಾಷ್ಟ್ರಕ್ಕೆ ಹೋಗಿ ವ್ಯಾಪಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ತಕ್ಷಣ ಮೊದಲಿದ್ದ ಖಾಸಗಿ ಮಾರುಕಟ್ಟೆ ಆರಂಭಿಸುವಂತೆ ಹೋರಾಟಗಾರರು ಒತ್ತಾಯಿಸಿದರು.
PublicNext
15/10/2024 03:34 pm