ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ಚಾಲಕನ ನಿರ್ಲಕ್ಷ್ಯ ಲಾರಿಗೆ ಬಸ್ ಡಿಕ್ಕಿ - 10 ಪ್ರಯಾಣಿಕರಿಗೆ ಗಾಯ

ಚಿಕ್ಕೋಡಿ: ಬಸ್ ಚಾಲಕನ ನಿರ್ಲಕ್ಷ್ಯ ದಿಂದ ಲಾರಿಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಪ್ರಯಾಣಿರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮದಲ್ಲಿ ನಡೆದಿದೆ.

ಚಿಕಾಲಗುಡ್ಡ ಗ್ರಾಮದ ಬಳಿ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಿಂದ ಖಾಸಗಿ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.

ಮಂಗಳೂರಿನಿಂದ ಅಥಣಿಗೆ ತೆರಳುತ್ತಿದ್ದ ಬಸ್.ಮೂರು ಜನ ಗಂಭೀರ ಗಾಯಾಳುಗಳನ್ನ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸಣ್ಣ ಪುಟ್ಟ ಗಾಯಾಳುಗಳಿಗೆ ಸಂಕೇಶ್ವರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Somashekar
PublicNext

PublicNext

15/10/2024 05:13 pm

Cinque Terre

14.24 K

Cinque Terre

0

ಸಂಬಂಧಿತ ಸುದ್ದಿ