ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಬಾಗಲಕೋಟೆ ಚರಂತಿಮಠದಲ್ಲಿ ಆರ್.ಸಿ.ಬಿ.‌ ಚಿಂತನ –ಮಂಥನ ಸಮಾವೇಶ ಆಯೋಜನೆ - ಮಾಜಿ ಡಿಸಿಎಂ ಈಶ್ವರಪ್ಪ

ಶಿವಮೊಗ್ಗ : ಅ. 20ರಂದು ಬಾಗಲಕೋಟೆಯ ಚರಂತಿಮಠ ಸಮುದಾಯ ಭವನದಲ್ಲಿ ಉತ್ತರ ಕರ್ನಾಟಕದ ಸುಮಾರು ಎರಡೂವರೆ ಸಾವಿರ ಕಾರ್ಯಕರ್ತರ ಚಿಂತನ – ಮಂಥನ ಸಮಾವೇಶ ನಡೆಸಲು ಆ ಭಾಗದ ಸಾಧು ಸಂತರು ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಪಕ್ಷಾತೀತ, ಜಾತ್ಯಾತೀತವಾಗಿರುತ್ತದೆ. ನಾಯಕತ್ವವನ್ನು ಆ ಭಾಗದ ಸಾಧು ಸಂತರೇ ವಹಿಸಲಿದ್ದಾರೆ. ಇಲ್ಲಿ ಈ ಬ್ರಿಗೇಡ್ ಗೆ ಯಾವ ಹೆಸರು ಘೋಷಣೆ ಮಾಡಬೇಕು. ಹಾಗೂ ಇದರ ಮುಂದಿನ ಕಾರ್ಯಕ್ರಮಗಳೇನು ಎಂದು ಆ ಸಮಾವೇಶದಲ್ಲಿ ಘೋಷಣೆ ಮಾಡಲಾಗುವುದು ಎಂದಿದ್ದಾರೆ.

ಈಗಾಗಲೇ, ರಾಜ್ಯದ ಎಲ್ಲಾ ಭಾಗಗಳಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಿಂದುಳಿದ ವರ್ಗದ ಸಂಘಟನೆ ಅಗತ್ಯ ಎಂಬುದನ್ನು ಜನ ಮನಗಂಡಿದ್ದಾರೆ. ಅನೇಕರು ಈಗಾಗಲೇ ನಾವು ಬರುತ್ತೇವೆ ಎಂದು ಸಂಪರ್ಕಿಸುತ್ತಿದ್ದಾರೆ. ಆದರೆ, ಅಲ್ಲಿ ಕೇವಲ ಎರಡೂವರೆ ಸಾವಿರ ಜನರಿಗೆ ಮಾತ್ರ ಅವಕಾಶವಿದ್ದು, ಪ್ರಮುಖರು ಮಾತ್ರ ಬರಲು ಅವಕಾಶವಿದೆ. ಆಗಮಿಸಿದವರ ಸಲಹೆಯನ್ನೂ ಕೂಡ ತೆಗೆದುಕೊಳ್ಳುತ್ತೇವೆ. ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದ್ದು, ಹಿಂದೆ ನಾನು ರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡಿದಾಗ ಕೂಡ ಅದೇ ರೀತಿ ಬೆಂಬಲ ವ್ಯಕ್ತವಾಗಿತ್ತು. ಪಕ್ಷದ ಹಿರಿಯರ ಮಾತಿಗೆ ಬೆಲೆ ಕೊಟ್ಟು ಅದನ್ನು ನಿಲ್ಲಿಸಿದ್ದೆ. ಆದರೆ, ನಾನು ತಪ್ಪು ಮಾಡಿದೆ ಎಂದು ಈಗ ಅನಿಸುತ್ತಿದೆ ಎಂದಿದ್ದಾರೆ.

Edited By : Suman K
PublicNext

PublicNext

15/10/2024 05:53 pm

Cinque Terre

15.95 K

Cinque Terre

0

ಸಂಬಂಧಿತ ಸುದ್ದಿ