ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ ಜುಲೈ ತಿಂಗಳಲ್ಲಿ ಸುರಿದ ಮಳೆಯ ಅವಾಂತರಗಳಿಂದ ಜನರು ಇನ್ನೂ ಹೊರ ಬಂದಿಲ್ಲ. ಮತ್ತೀಗ ಪ್ರತಿದಿನ ಎಡೆ ಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ಅವಾಂತರಗಳು ಸೃಷ್ಟಿಯಾಗುತ್ತಿವೆ.
ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿಯ ಗೌರಮ್ಮ ಎಂಬುವರ ಮನೆ ಧಾರಾಕಾರ ಮಳೆಗೆ ಮೇಲ್ಛಾವಣಿ ಸಮೇತ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಸಿತ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ನಾಶವಾಗಿವೆ. ವಾಸ ಮಾಡಲು ಬೇರೆ ಜಾಗವಿಲ್ಲದೆ ಮನೆ ಮಂದಿ ಗುಡಿಸಲಿನಲ್ಲಿ ವಾಸಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಇತ್ತ ಗಮನಹರಿಸಬೇಕಾಗಿದೆ.
PublicNext
15/10/2024 06:19 pm