ವಿಜಯಪುರ: ವಕ್ಫ್ ಕಾಯ್ದೆ ವಿರೋಧಿಸಿ ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ, ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ, ಸಂಸದ ರಮೇಶ ಜಿಗಜಿಣಗಿ ಹಾಗೂ ಇತರ ಮುಖಂಡರು ಭಾಗಿಯಾಗಿದ್ದರು. ವಂದೇ ಮಾತರಂ ಗಾಯನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ವಕ್ಫ್ ಕಾಯ್ದೆ ರದ್ದತಿಗೆ ಬಿಜೆಪಿ ಮುಖಂಡರು ಆಗ್ರಹಿಸಿದರು.
ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ ವಿಜಯಪುರ
PublicNext
15/10/2024 08:32 pm