ಮೂಡಿಗೆರೆ: ಕೆಂಪೇಗೌಡ ಒಕ್ಕಲಿಗರ ವೇದಿಕೆಯಿಂದ ಇತ್ತೀಚೆಗೆ ನಿಧನರಾದ ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮೂಡಿಗೆರೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ದಿವಂಗತ ರತನ್ ಟಾಟಾ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮುಖಾಂತರ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಂಘದ ಹಿರಿಯ ಸಲಹೆಗಾರರು, ಒಕ್ಕಲಿಗ ಸಮಾಜದ ಮುಖಂಡರು ಅಗಲಿದ ಚೇತನಕ್ಕೆ ತಮ್ಮ ಗೌರವ ನಮನ ಸಲ್ಲಿಸಿದರು.
Kshetra Samachara
15/10/2024 08:44 pm