ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಭಾಗಮಂಡಲದಲ್ಲಿ ನಡೆದಿದೆ. ಚೇರಂಗಾಲ ನಿವಾಸಿ ಮತ್ತಾರಿಮನೆ ಕರುಣಾಕರ (34) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕರುಣಾಕರ ಹಾಗೂ ಮತ್ತಿಬ್ಬರು ಚೇರಂಗಾಲದಿಂದ ಸುಮಾರು 1.5 ಕಿ.ಮೀ ದೂರದ ಪ್ರದೇಶದಲ್ಲಿ ತೆರಳುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ.
ಇಬ್ಬರು ಕಾಡಾನೆಯಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಕರುಣಾಕರ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಅರಣ್ಯಾಧಿಕಾರಿಗಳು ಹಾಗೂ ಭಾಗಮಂಡಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕುರಿತು ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
16/10/2024 08:11 am