ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾರುಗೊಪ್ಪ ಸರಕಾರಿ ಪ್ರಾಥಮಿಕ ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಬೈಲಹೊಂಗಲ-ಬೈಲಹೊಂಗಲ ಮತಕ್ಷೇತ್ರದ ಹಾರುಗೊಪ್ಪ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯು ಕರ್ನಾಟಕ ರಾಜ್ಯ ಶಿಕ್ಷಕರ ಸಂಘಗಳ ಪರಿಷತ್ತು ರಾಜ್ಯ ಘಟಕ ಧಾರವಾಡ ಇವರು ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಆದರ್ಶ ಶಾಲೆ ಪ್ರಶಸ್ತಿಗೆ ಭಾಜನವಾಗಿದೆ.

ಸವದತ್ತಿಯ ನಿಕ್ಕಂ ಕಲ್ಯಾಣ ಮಂಟಪದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಶಿಕ್ಷಕರ ದಿನಾಚಾರಣೆಯ ಕಾರ್ಯಕ್ರಮದ ಅಂಗವಾಗಿ ಪರಿಷತ್ತಿನ್ ರಾಜ್ಯಾಧ್ಯಕ್ಷ ಸಂಗಮೇಶ ಖನ್ನಿನಾಯ್ಕರ ಅವರು ಶಾಲೆಯ ಪರವಾಗಿ ಮುಖ್ಯೋಪಾಧ್ಯಾಯರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕ ವಿಶ್ವಾಸ ವೈಧ್ಯ, ಡಿಡಿಪಿಐ ಲೀಲಾವತಿ ಹಿರೇಮಠ, ಬಿಇಓ ಮೋಹನ ದಂಡಿನ, ಸಿಆರ್‍ಪಿ ರಪೀಕ್ ಮುರಗೋಡ, ಮುಖ್ಯೋಪಾಧ್ಯಾಯ ಉದಯಕುಮಾರ ಕುರಕುರೆ ಹಾಗೂ ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು, ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/10/2024 11:05 am

Cinque Terre

3.78 K

Cinque Terre

0

ಸಂಬಂಧಿತ ಸುದ್ದಿ