ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ಕೊಲೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹೆಂಡತಿ ಸಹನಾರಿಗೆ ಮಂಗಳವಾರ ರಾತ್ರಿ ಗಂಡು ಮಗು ಜನನವಾಗಿದ್ದು ಮಗು ಆರೋಗ್ಯವಾಗಿದೆ.
ಚಿತ್ರದುರ್ಗ ನಗರದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಸಹನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ಸಂದರ್ಭದಲ್ಲಿ ಪತ್ನಿ ಸಹನ ಗರ್ಭಿಣಿಯಾಗಿದ್ದರು. ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿ ಸಹನ ಬೆಳಗಿನ ಜಾವ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ -ಮಗು ಆರೋಗ್ಯವಾಗಿದ್ದಾರೆ. ಸಹನಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಸಹನಾ ಅವರು ತಮ್ಮ ಪತ್ನಿಯ ಸಾವಿನ ನಂತರ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾರೆ. ಅವರಲ್ಲಿ ಸಾಕಷ್ಟು ಪೋಷಕಾಂಶದ ಕೊರತೆ ಇತ್ತು. ಸರಿಯಾಗಿ ಟ್ರೀಟ್ಮೆಂಟನ್ನು ನೀಡಿ ಹೆರಿಗೆ ಮಾಡಿಸಲಾಗಿದೆ. ತಾಯಿ ಮಗುವನ್ನು ಆರೈಕೆ ಮಾಡಲಾಗುತ್ತಿದೆ ಎಂದು ಕೀರ್ತಿ ಆಸ್ಪತ್ರೆಯ ಡಾ.ಮಲ್ಲಿಕಾರ್ಜುನ್ ರವರು ತಿಳಿಸಿದ್ದಾರೆ.
PublicNext
16/10/2024 12:00 pm