ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರ್ನಾಡು ಸಹಕಾರಿ ಸಂಘದ ಉದ್ಯೋಗಿ ಮೃತಪಟ್ಟ ಘಟನೆ ಸುಳ್ಯದ ಪೈಚಾರು-ಸೋಣಂಗೇರಿ ರಸ್ತೆಯ ಆರ್ತಾಜೆ ಎಂಬಲ್ಲಿ ನಡೆದಿದೆ.
ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಲೆಕ್ಕಿಗ ಬೋಜಪ್ಪ (56) ಮೃತಪಟ್ಟವರು. ಐವರ್ನಾಡುವಿನಿಂದ ಸುಳ್ಯಕ್ಕೆ ಬರುತ್ತಿದ್ದ ಬೋಜಪ್ಪ ಚಲಾಯಿಸುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಎಲಿಮಲೆ ಕಡೆಗೆ ಹೋಗುತ್ತಿದ್ದ ಬುಲೆಟ್
ಆರ್ತಾಜೆ ಎಂಬಲ್ಲಿ ಮುಖಾಮುಖಿ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ.
ಘಟನೆಯಲ್ಲಿ ಬೋಜಪ್ಪ ಗಂಭೀರ ಒ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿ ಈ ರುವುದಾಗಿ ತಿಳಿದು ಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬುಲೆಟ್ ಬೈಕ್ ಸವಾರರಾದ ನೆಲ್ಲೂರು ಕೆಮ್ರಾಜೆ ಗ್ರಾಮದ ಮಂದ್ರಪ್ಪಾಡಿಯ ವಸಂತ ಮತ್ತು ಅರುಣ್ ಗಾಯಗೊಂಡಿದ್ದು ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಎರಡೂ ಬೈಕ್ ಗಳು ಜಖಂಗೊಂಡಿದೆ. ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
16/10/2024 12:18 pm