ಬೆಂಗಳೂರು: ನಗರದಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪ್ರಸ್ತುತ ಸುಮಾರು 3 ಅಡಿ ನೀರು ನಿಂತಿದ್ದು, ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆಯಾಗುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರು ಇಂದು ಬೆಳಗ್ಗೆ ವರ್ಚುವಲ್ ಮೂಲಕ ಸಭೆ ನಡೆಸಿ, ಆಯಾ ವಲಯ ವ್ಯಾಪ್ತಿಯಲ್ಲಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು.ಸ್ಥಳದಲ್ಲಾಗಿರುವ ಸಮಸ್ಯೆ ಬಗ್ಗೆ ಅವಲೋಕಿಸಿ ಆ ಸ್ಥಳದಲ್ಲಿ ಶಾಶ್ವತ ಪರಿಹಾರ ಹುಡುಕಿ, ಇರುವ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲಾ ವಲಯಗಳ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಾಗರೀಕರಿಂದ ಬರುವ ದೂರುಗಳಿಗೆ ಕೂಡಲೇ ಸ್ಪಂದಿಸಲು ಸೂಚನೆ ನೀಡಿದರು.
PublicNext
16/10/2024 12:53 pm