ಬೈಲಹೊಂಗಲ: ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ಹಚ್ಚುವಾಗ ಕರೆಂಟ್ ಶಾಕ್ ತಗುಲಿ ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಮಂಗಳವಾರ ಜರುಗಿದೆ.
ಮೃತಳನ್ನು ರೇಖಾ ರುದ್ರಪ್ಪ ಹುಡೇದ (52) ಎಂದು ಗುರುತಿಸಲಾಗಿದೆ. ಮೃತರಿಗೆ ಪತಿ, ಮೂವರು ಪುತ್ರಿಯರು, ಪುತ್ರ ಇದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
16/10/2024 01:40 pm