ಹಾಸನ : ಹಾಸನ ನಗರಸಭೆ ವತಿಯಿಂದ ಬೆಳ್ಳಂಬೆಳಗ್ಗೆ ನಗರದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ನಗರಸಭೆ ಆಯುಕ್ತ ನರಸಿಂಹಮೂರ್ತಿ ನೇತೃತ್ವದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ಜೆಸಿಬಿ ಮೂಲಕ ಅಕ್ರಮ ಶೆಡ್, ಬ್ಯಾನರ್, ಫ್ಲೆಕ್ಸ್ ಹಾಗೂ ಕಟ್ಟಡಗಳ ತೆರವು ಮಾಡಲಾಗುತ್ತಿದೆ.
ಈ ವೇಳೆ ಕಟ್ಟಡ ಮಾಲೀಕರು ಮತ್ತು ನಗರಸಭೆ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಯಾವುದೇ ನೋಟಿಸ್ ನೀಡದೆ ಏಕಾಏಕಿ ಕಟ್ಟಡಗಳನ್ನ ತೆರವುಗೊಳಿಸುತ್ತಿದ್ದಾರೆ ಎಂದು ಮಾಲೀಕರು ಆರೋಪಿಸಿದ್ದು, ಇದ್ಯಾವುದನ್ನೂ ಲೆಕ್ಕಿಸದೆ ನಗರಸಭೆ ಸಿಬ್ಬಂದಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
PublicNext
16/10/2024 02:15 pm