ಬೆಂಗಳೂರು: ಕಳೆದೆರಡು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಎಡಬಿಡದೆ ಮಳೆ ಆಗ್ತಿದೆ ಇದ್ರಿಂದ ಇಡಿ ಬೆಂಗಳೂರಿನ ರಸ್ತೆಗಳು ಸಂಪೂರ್ಣ ಜಲವೃತವಾಗಿವೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಇನ್ನೂ ರಸ್ತೆಗಳಂತು ಗುಂಡಿಗಳು ಬಿದ್ದು ಎಲ್ಲಾ ಹಾಳಾಗಿವೆ ಐಟಿ ಕಾರ್ಡಾರ್ ರಸ್ತೆಗಳೆಲ್ಲ ನೀರು ನುಗ್ಗಿ ಸಂಚಾರಕ್ಕೆ ಆಡಚಣೆಯಾಗಿದೆ ಇನ್ನೂ ಕಡ್ಡಡ ನಿರ್ಮಾಣ ಸ್ಥಳದಲ್ಲಿ ಕುಸಿತ ಉಂಟಾಗಿರುವ ವರದಿಗಳು ಎಲ್ಲಡೆ ಅಂತಕ ಸೃಷಿಯಾಗಿದೆ.
ಇಷ್ಟೆಲ್ಲ ಅವಾಂತರ ಸೃಷ್ಟಿಯಾದರು ರಾಜ್ಯ ಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿಲ್ಲ ಎಂದು ಜೆಡಿಎಸ್ ಟೀಕಿಸಿದೆ. ಬ್ರ್ಯಾಂಡ್ ಬೆಂಗಳೂರು ಯೋಜನೆ ಮುಳುಗುತ್ತಿದೆ ಆದ್ರೆ ಡೂಪ್ಲಿಕೇಟ್ ಸಿಎಂ ಫೋಟೋಶೂಟ್ ನಲ್ಲಿ ಬ್ಯುಸಿಯಾಗಿದ್ದಾರೆ ಎಂದು ಡಿಕೆಶಿ ವಿರುದ್ಧ ಜೆಡಿಎಸ್ ಪರೋಕ್ಷವಾಗಿ ಅಕ್ರೋಶ ಹೊರಹಾಕಿದೆ. ರಾಜ್ಯ ಸರ್ಕಾರದ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ಹೊರಹಾಕಿರುವ ಜೆಡಿಎಸ್, ದೇವೆಗೌಡರ ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು. ಆ ನಂತರ ಬಂದ ಕಾಂಗ್ರೆಸ್ ಸರಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು. ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ್ಯಾಂಡ್ ಬೆಂಗಳೂರು! ಬ್ರ್ಯಾಂಡ್ ಬೆಂಗಳೂರು ಮುಳುಗುತ್ತಿದೆ! ಡೂಪ್ಲಿಕೇಟ್ ಸಿಎಂ ಫೋಟೋಶೂಟ್ ನಲ್ಲಿ ಬ್ಯುಸಿಯಾಗಿದ್ದಾರೆ!! ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಎಂದು ಜೆಡಿಎಸ್ ಟೀಕಿಸಿದೆ.
PublicNext
16/10/2024 03:09 pm