ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ದೊರೆಯುವ ಶೈಕ್ಷಣಿಕ ಸಹಾಯಧನ ಕಡಿತ ಮಾಡಿರುವ ಆದೇಶವನ್ನು ವಾಪಸ್ ಪಡೆದು ಹೈಕೋರ್ಟ್ ಆದೇಶದಂತೆ ಬಾಕಿ ಇರುವ ಶೈಕ್ಷಣಿಕ ಧನ ಸಹಾಯವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯ್ತು.

ಇದೇ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ, ಅತ್ಯಂತ ಸಂಕಷ್ಠದಲ್ಲಿ ಜೀವನ ನಡೆಸುತ್ತಿರುವ ಕಟ್ಟಡ ಕಾರ್ಮಿಕರು ತನ್ನ ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಂಡಳಿಯಿಂದ ದೊರೆಯುವ ವಿದ್ಯಾರ್ಥಿ ವೇತನದಿಂದ ಪ್ರಯೋಜನವಾಗುತ್ತಿತ್ತು. ಕಳೆದ ವರ್ಷ ಪೂರ್ವನ್ವಯವಾಗುವಂತೆ ವಿದ್ಯಾರ್ಥಿವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತ ಮಾಡಿರುವುದು ಖಂಡನೀಯ.

ಕೂಡಲೇ ಈ ಆದೇಶವನ್ನು ವಾಪಸ್ ಪಡೆದು, ಹಿಂದಿನಂತೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

Edited By : Abhishek Kamoji
Kshetra Samachara

Kshetra Samachara

16/10/2024 06:12 pm

Cinque Terre

300

Cinque Terre

0

ಸಂಬಂಧಿತ ಸುದ್ದಿ