ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ವಿಐಪಿ ದರ್ಶನಕ್ಕೆ ಪ್ರತ್ಯೇಕ ಸಮಯ ನಿಗದಿ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ವಿಐಪಿ ದರ್ಶನದ ವ್ಯವಸ್ಥೆಯಿಂದಾಗಿ ಸಾರ್ವಜನಿಕರಿಗೆ ಅನಾನುಕೂಲಗಳಾಗುತ್ತವೆ ಎಂಬ ಮಾತು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿಐಪಿ ದರ್ಶನಕ್ಕೆ ದಿನಕ್ಕೆ ಒಂದು ಗಂಟೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಿದರೆ ಸಾರ್ವಜನಿಕರಿಗೆ ಯಾವುದೇ ಅನಾನುಕೂಲವಾಗುವುದಿಲ್ಲ. ಜನಪ್ರತಿನಿಧಿಗಳು ಕೂಡ ದಿನದ 24 ಗಂಟೆಯೂ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಒತ್ತು ನೀಡಿರುತ್ತಾರೆ. ಆದ್ದರಿಂದ ಅಂತವರಿಗೆ ವಿಐಪಿ ದರ್ಶನದ ವ್ಯವಸ್ಥೆ ಅಗತ್ಯವಿರುತ್ತದೆ. ಇದರಿಂದ ಸಾರ್ವಜನಿಕರಿಗೆ ಅನಾನುಕೂಲಗಳಾಗುತ್ತವೆ ಎಂಬ ಮಾತು ಕೇಳಿ ಬರುತ್ತಿರುವುದರಿಂದ ವಿಐಪಿ ದರ್ಶನಕ್ಕೆ ಪ್ರತ್ಯೇಕ ಸಮಯ ನಿಗದಿಪಡಿಸಿದರೆ ಯಾರಿಗೂ ಕೂಡ ಅನಾನುಕೂಲವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
Kshetra Samachara
16/10/2024 07:35 pm