ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ವಿಐಪಿ ದರ್ಶನಕ್ಕೆ ದಿನದ ಒಂದು ಗಂಟೆ ಮೀಸಲಿಡಿ -ಶಾಸಕ ಸಿಮೆಂಟ್ ಮಂಜು

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ವಿಐಪಿ ದರ್ಶನಕ್ಕೆ ಪ್ರತ್ಯೇಕ ಸಮಯ ನಿಗದಿ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ವಿಐಪಿ ದರ್ಶನದ ವ್ಯವಸ್ಥೆಯಿಂದಾಗಿ ಸಾರ್ವಜನಿಕರಿಗೆ ಅನಾನುಕೂಲಗಳಾಗುತ್ತವೆ ಎಂಬ ಮಾತು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿಐಪಿ ದರ್ಶನಕ್ಕೆ ದಿನಕ್ಕೆ ಒಂದು ಗಂಟೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಿದರೆ ಸಾರ್ವಜನಿಕರಿಗೆ ಯಾವುದೇ ಅನಾನುಕೂಲವಾಗುವುದಿಲ್ಲ. ಜನಪ್ರತಿನಿಧಿಗಳು ಕೂಡ ದಿನದ 24 ಗಂಟೆಯೂ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಒತ್ತು ನೀಡಿರುತ್ತಾರೆ. ಆದ್ದರಿಂದ ಅಂತವರಿಗೆ ವಿಐಪಿ ದರ್ಶನದ ವ್ಯವಸ್ಥೆ ಅಗತ್ಯವಿರುತ್ತದೆ. ಇದರಿಂದ ಸಾರ್ವಜನಿಕರಿಗೆ ಅನಾನುಕೂಲಗಳಾಗುತ್ತವೆ ಎಂಬ ಮಾತು ಕೇಳಿ ಬರುತ್ತಿರುವುದರಿಂದ ವಿಐಪಿ ದರ್ಶನಕ್ಕೆ ಪ್ರತ್ಯೇಕ ಸಮಯ ನಿಗದಿಪಡಿಸಿದರೆ ಯಾರಿಗೂ ಕೂಡ ಅನಾನುಕೂಲವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

Edited By : Suman K
Kshetra Samachara

Kshetra Samachara

16/10/2024 07:35 pm

Cinque Terre

1.12 K

Cinque Terre

0

ಸಂಬಂಧಿತ ಸುದ್ದಿ