ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಮಕ್ಕಳಿಗೆ ವಾಲಿಬಾಲ್ ತರಬೇತಿ ನೀಡುವ ಸಂದರ್ಭ ಕುಸಿದು ಬಿದ್ದು ಶಿಕ್ಷಕ ಸಾವು

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುವ ಸಂದರ್ಭದಲ್ಲಿ ಕುಸಿದು ಬಿದ್ದು ಶಿಕ್ಷಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು, ಗಜಾನನ ಹಿರೇಮಠ ಎಂಬುವವರೇ ದುರ್ದೈವಿ ಶಿಕ್ಷಕರಾಗಿದ್ದಾರೆ.

ಕ್ರಾಫ್ಟ್ ಜೊತೆಗೆ ಮಕ್ಕಳಿಗೆ ವಿವಿಧ ಕ್ರೀಡೆ ಕುರಿತು ತರಬೇತಿ ನೀಡುತ್ತಿದ್ದ ಗಜಾನನ ಅವರು, ಶಾಲಾವರಣದಲ್ಲಿ ಮಕ್ಕಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆ ತಂದರೂ ಕೂಡ, ಮಾರ್ಗ ಮಧ್ಯೆ ಅಸು ನೀಗಿದ್ದಾರೆ.

ಇನ್ನು ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪದಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಆಡಳಿತ ಮಂಡಳಿಯವರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Edited By : Nagesh Gaonkar
PublicNext

PublicNext

16/10/2024 08:09 pm

Cinque Terre

30.55 K

Cinque Terre

0

ಸಂಬಂಧಿತ ಸುದ್ದಿ