ಬೆಂಗಳೂರು : ಶಿಗ್ಗಾಂವಿಯಲ್ಲಿ ಅಲ್ಪಸಂಖ್ಯಾತರ ಪ್ರಾಬಲ್ಯ ಇದೆ ಕಳೆದ ಐದಾರು ಬಾರಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡಲಾಗಿದೆ. ಈ ಬಾರಿಯೂ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡ್ತೀವಿ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಇನ್ನೂ ಸಂಡೂರಿನಲ್ಲಿ ಶ್ರೀರಾಮುಲು ಅಲ್ಲ, ನರೇಂದ್ರ ಮೋದಿ ಸ್ಪರ್ಧೆ ಮಾಡಿದ್ರೂ ಕಾಂಗ್ರೆಸ್ ಗೆಲ್ಲುತ್ತೆ, ಶೀಘ್ರದಲ್ಲೇ ಸಂಡೂರ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಚನ್ನಪಟ್ಟಣದಲ್ಲೂ ಕಾಂಗ್ರೆಸ್ ಗೆಲ್ಲುತ್ತೆ. ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಮಾಡೋದು ಅವರ ಪಕ್ಷಕ್ಕೆ ಬಿಟ್ಟದ್ದು ಯೋಗೇಶ್ವರ್ ಕಾಂಗ್ರೆಸ್ಗೆ ಕರೆತರುವ ಬಗ್ಗೆ ಆಲೋಚನೆ ಇಲ್ಲ. ಅಲ್ಲಿ ಕಾಂಗ್ರೆಸ್ ಪಕ್ಷದ ಸಮರ್ಥ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂದಿದ್ದಾರೆ.
PublicNext
16/10/2024 08:13 pm