ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದಲ್ಲಿ ಜೈಲುಪಾಲಾಗಿದ್ದ ಮಾಜಿ ಸಚಿವ ನಾಗೇಂದ್ರ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.
ಬಿಡುಗಡೆಯ ಬಳಿಕ ನಾಗೇಂದ್ರ ಇಂದು ಸಂಜೆ ಸಿಎಂ ಕಾವೇರಿ ನಿವಾಸದಲ್ಲಿ ಸಚಿವ ಜಮೀರ್ ಅಹ್ಮದ್ ಜೊತೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಚರ್ಚೆ ನಡೆಸಿದರು. ಜೈಲಿನಿಂದ ಬಿಡುಗಡೆ ಬಳಿಕ ED ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ಹೆಸರು ಹೇಳುವಂತೆ ಒತ್ತಡ ಹಾಕಿದ್ರು ಎಂಬ ಹೇಳಿಕೆಯನ್ನ ನಾಗೇಂದ್ರ ನೀಡಿದ್ದರು.
ಇಂದು ಬಿಡುಗಡೆ ಬಳಿಕ ವಾಲ್ಮೀಕಿ ನಿಗಮದ ಹಗರಣದ ತನಿಖೆಯಲ್ಲಿ ED ಅಧಿಕಾರಿಗಳು ನಡೆದುಕೊಂಡು ರೀತಿಯ ಬಗ್ಗೆ ಸಿಎಂ ಜೊತೆ ನಾಗೇಂದ್ರ ಚರ್ಚಿಸಿದ್ದಾರೆ ಎನ್ನಲಾಗಿದೆ. ಅಲ್ದೇ ಉಪಚುನಾವಣೆಯಲ್ಲಿ ಸಂಡೂರು ಕ್ಷೇತ್ರದಲ್ಲಿ ಒಡಾಡಿ ಪಕ್ಷದ ಗೆಲುವಿಗೆ ಶ್ರಮಿಸು ಬಗ್ಗೆ ಸಿಎಂ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ.
PublicNext
16/10/2024 09:24 pm