ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ: ನಿಯಂತ್ರಣ ತಪ್ಪಿದ ಸ್ಕೂಟರ್ ಮರಕ್ಕೆ ಡಿಕ್ಕಿ- ಸವಾರ ಸ್ಥಳದಲ್ಲಿಯೇ ಮೃತ್ಯು

ಉಳ್ಳಾಲ: ನಿಯಂತ್ರಣ ತಪ್ಪಿದ ಆ್ಯಕ್ಟೀವಾ ಸ್ಕೂಟರ್ ರಸ್ತೆಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರದಲ್ಲಿ ಬುಧವಾರ ಸಂಭವಿಸಿದೆ. ಮಾಡೂರು ಶಿವಾಜಿನಗರದ ನಿವಾಸಿ ನಾಗೇಶ್ (50 ವರ್ಷ) ಮೃತಪಟ್ಟವರು.

ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಕಾಲೇಜು ಬಸ್ಸು ನಿರ್ವಾಹಕರಾಗಿ ನಾಗೇಶ್ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಕೆಲಸಕ್ಕೆ ರಜೆಯಿದ್ದ ಕಾರಣ ಬೀರಿ ಪೇಟೆಯಿಂದ ತೆಂಗಿನ ಕಾಯಿಗಳನ್ನು ಖರೀದಿಸಿ ಸ್ಕೂಟರ್‌ ನಲ್ಲಿ ಮನೆಗೆ ಬರುತ್ತಿದ್ದರು. ಈ ಸಂದರ್ಭ ನಿಯಂತ್ರಣ ತಪ್ಪಿದ ಸ್ಕೂಟರ್ ಮರಕ್ಕೆ ಬಡಿದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Edited By : Manjunath H D
PublicNext

PublicNext

16/10/2024 09:52 pm

Cinque Terre

58.02 K

Cinque Terre

0

ಸಂಬಂಧಿತ ಸುದ್ದಿ