ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಶಾಸಕ ಬೇಳೂರು ಗೋಪಾಲಕೃಷ್ಣ ಕಣ್ಣಿಗೆ ಬಿತ್ತು ಬೃಹತ್ ರಸ್ತೆ ಹೊಂಡ!- ತಕ್ಷಣ ಮುಚ್ಚುವಂತೆ ಅಧಿಕಾರಿಗಳಿಗೆ ಆದೇಶ

ಸಾಗರ: ನಗರದ ಬಿ.ಹೆಚ್. ರಸ್ತೆಯಲ್ಲಿ ಇರುವ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಹೆದ್ದಾರಿಯಲ್ಲಿ ಅನಾಹುತಕ್ಕೆ ದಾರಿ ಮಾಡಿಕೊಡುವ ರೀತಿಯಲ್ಲಿ ಬೃಹತ್ ಗಾತ್ರದ ಹೊಂಡ ಬಿದ್ದಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಬುಧವಾರ ರಾತ್ರಿ ಸಾಗರ ವಿಧಾನಸಭಾ ಕ್ಷೇತ್ರ ಶಾಸಕ ಹಾಗೂ ಅರಣ್ಯ ಇಲಾಖೆ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ಬಿ.ಹೆಚ್. ರಸ್ತೆಯ ಮಾರ್ಗವಾಗಿ ಸರ್ಕಾರಿ ಪ್ರವಾಸಿ ಮಂದಿರಕ್ಕೆ ತೆರಳುವ ಸಂದರ್ಭದಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಬೃಹತ್ ಗಾತ್ರದ ಹೊಂಡ ಕಂಡು ತಕ್ಷಣ ತಮ್ಮ ವಾಹನ ನಿಲ್ಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸ್ಥಳಕ್ಕೆ ಕರೆಸಿಕೊಂಡು ಆದಷ್ಟು ಬೇಗ ಹೊಂಡ ಮುಚ್ಚುವಂತೆ ಆದೇಶ ನೀಡಿದರು.

ಸ್ಥಳಕ್ಕೆ ಆಗಮಿಸಿದ ನಗರಸಭೆ ಪರಿಸರ ಅಭಿಯಂತರ ಮದನ್ ಕೆ. ಅವರು ಶಾಸಕರ ಆದೇಶದಂತೆ ರಸ್ತೆಯಲ್ಲಿ ಬಿದ್ದಿರುವ ಬೃಹತ್ ಗಾತ್ರದ ಗುಂಡಿ ಮುಚ್ಚುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸುರೇಶ್ ಬಾಬು, ನಗರಸಭಾ ಸದಸ್ಯರಾದ ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಮಧು ಮಾಲತಿ ಹಾಜರಿದ್ದರು.

Edited By : Ashok M
PublicNext

PublicNext

17/10/2024 07:33 am

Cinque Terre

31.94 K

Cinque Terre

1

ಸಂಬಂಧಿತ ಸುದ್ದಿ