ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡಕ್ಕೆ ಬಂದ ಕಿತ್ತೂರು ರಾಣಿ ಚೆನ್ನಮ್ಮಳ ವಿಜಯ ಜ್ಯೋತಿ

ಧಾರವಾಡ: ಕಿತ್ತೂರಿನ ವೀರ ರಾಣಿ ಚೆನ್ನಮ್ಮಳ ಜಯಂತ್ಯುತ್ಸವದ ಅಂಗವಾಗಿ ಬೆಂಗಳೂರಿನಿಂದ ಬಂದ ವಿಜಯ ಜ್ಯೋತಿ ಧಾರವಾಡಕ್ಕೆ ಬಂದು ತಲುಪಿದೆ.

ಧಾರವಾಡದ ಜಿಲ್ಲಾಧಿಕಾರಿ ಕಚೇರಿಗೆ ಬಂದ ಈ ವಿಜಯ ಜ್ಯೋತಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಜಿಲ್ಲಾಧಿಕಾರಿ ದಿವ್ಯ ಪ್ರಭು, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಸೇರಿದಂತೆ ಅನೇಕರು ವಿಜಯ ಜ್ಯೋತಿಗೆ ಸ್ವಾಗತ ಕೋರಿ ಪೂಜೆ ಸಲ್ಲಿಸಿದರು.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ್ದರು. ಅಲ್ಲಿಂದ ಆರಂಭವಾಗಿದ್ದ ಈ ವಿಜಯ ಜ್ಯೋತಿ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳ ಮೂಲಕ ಹಾದು ಧಾರವಾಡಕ್ಕೆ ಬಂದು ಅಲ್ಲಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಿದೆ.

Edited By : Ashok M
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/10/2024 08:24 am

Cinque Terre

38.49 K

Cinque Terre

0

ಸಂಬಂಧಿತ ಸುದ್ದಿ