ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆ ಆದಿ ಜಾಂಬವ ಯುವ ಬ್ರಿಗೇಡ್ ಮತ್ತು ಮಾನವ ಬಂಧುತ್ವ ಯುವ ವೇದಿಕೆ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆದಿ ಜಾಂಬವ ಯುವ ಬ್ರಿಗೇಡ್ ನ ಜಿಲ್ಲಾಧ್ಯಕ್ಷ ಶಿವಾನಂದ ಆರ್.ಕೆ ಮಾತನಾಡಿ ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಆದಿ ಕವಿ ವಾಲ್ಮೀಕಿ ಮಹರ್ಷಿಯವರ ಸಾಧನೆಗಳನ್ನು ನೆನಪಿಸಿಕೊಳ್ಳುವುದು ಆದ್ಯ ಕರ್ತವ್ಯ ಎಂದರು.
ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಡಿವೇಪ್ಪ ಹಾದಿಮನಿ ವಾಲ್ಮೀಕಿ ಜನಾಂಗದ ಯುವ ನಾಯಕ ಪರಮೇಶ್ವರ್ ಕೆಂದೂರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/10/2024 11:14 am