ಬೆಂಗಳೂರು : ಎರಡು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿದ್ದ ಮಳೆರಾಯನಿಂದ ಬೆಂಗಳೂರಿಗೆ ಇಂದು ಸ್ವಲ್ಪ ಬಿಡುವು ಸಿಕ್ಕಿದೆ. ಎರಡು ದಿನಗಳಿಂದ ಹೈರಾಣಾಗಿದ್ದ ಬೆಂಗಳೂರಿನಲ್ಲಿ ಕೊಂಚ ಮಳೆಯ ಪ್ರಮಾಣ ತಗ್ಗಿದೆ. ಆದರೂ ಬೆಂಗಳೂರಿನಲ್ಲಿ ಮೊದ ಕವಿದ ವಾತಾವರಣ ಮುಂದುವರೆದಿದೆ.
ಬೆಂಗಳೂರಿನಲ್ಲಿ ಕೊಂಚ ಮಳೆ ತಗ್ಗಿದರು, ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ನೀಡಿದೆ. ಇಂದು ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ.
ಇನ್ನು ನಿನ್ನೆ ಸುರಿದ ಭಾರಿ ಮಳೆ ಹಿನ್ನೆಲೆ ಒಂದೇ ದಿನ ಬೆಂಗಳೂರಿನಲ್ಲಿ 4 ಮರಗಳು ಧರೆಗುರುಳಿವೆ. ದಕ್ಷಿಣ ವಲಯ ಹಾಗೂ ಯಲಹಂಕ, ಪೂರ್ವ ವಲಯ ಗಳಲ್ಲಿ ಅತೀ ಹೆಚ್ಚು ಮರಗಳು ಬಿದ್ದಿವೆ.
PublicNext
17/10/2024 11:35 am