ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಬಿಎಂಪಿಯಿಂದ ಹೊಸ ಯೋಜನೆ, ಬೀದಿ ನಾಯಿಗಳಿಗೆ ರೆಸ್ಟೋರೆಂಟ್ ಗಳಲ್ಲಿ ಉಳಿದ ಆಹಾರ ನೀಡಲು ಪ್ಲ್ಯಾನ್

ಬೆಂಗಳೂರು: ಇತ್ತೀಚಿಗೆ ನಾಯಿಗಳ ಕಡಿತ ಹಾಗೂ ದಾಳಿಯ ಭಯದಿಂದ ನಾಯಿಗಳ ಮೇಲೆ ಕೇವಲ ನಕಾರಾತ್ಮಕ ಭಾವನೆ ಹೆಚ್ಚಾಗಿದೆ. ಸಮಾಜಕ್ಕೆ ನಾಯಿಗಳ ಸಕಾರಾತ್ಮಕ ಕೊಡುಗೆಗಳನ್ನು ಆಚರಿಸಲು ಇಂದು ಬಿಬಿಎಂಪಿ ನಾಯಿಗಳ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಿಬಿಎಂಪಿಯಿಂದ ಇಂದು ಶ್ವಾನಗಳ ಉತ್ಸವ ಆಯೋಜನೆಯನ್ನು ಇಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದರು. ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಣಿಗಳು ಹಾಗೂ ಮಾನವ ಸಂಘರ್ಷ ಕಡಿಮೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಿದ್ದು, ಪ್ರತಿ ವಾರ್ಡ್ ಗಳಲ್ಲಿ ನಿರಂತರವಾಗಿ ಪ್ರತಿ ದಿನ ಒಂದು ಬಾರಿ ಆಹಾರವನ್ನು ನೀಡುವ ಯೋಜನೆ ಹೊಂದಿದೆ ಬಿಬಿಎಂಪಿ.

Edited By : Suman K
PublicNext

PublicNext

17/10/2024 12:11 pm

Cinque Terre

20.91 K

Cinque Terre

0

ಸಂಬಂಧಿತ ಸುದ್ದಿ