ಬೆಂಗಳೂರು: ಇತ್ತೀಚಿಗೆ ನಾಯಿಗಳ ಕಡಿತ ಹಾಗೂ ದಾಳಿಯ ಭಯದಿಂದ ನಾಯಿಗಳ ಮೇಲೆ ಕೇವಲ ನಕಾರಾತ್ಮಕ ಭಾವನೆ ಹೆಚ್ಚಾಗಿದೆ. ಸಮಾಜಕ್ಕೆ ನಾಯಿಗಳ ಸಕಾರಾತ್ಮಕ ಕೊಡುಗೆಗಳನ್ನು ಆಚರಿಸಲು ಇಂದು ಬಿಬಿಎಂಪಿ ನಾಯಿಗಳ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬಿಬಿಎಂಪಿಯಿಂದ ಇಂದು ಶ್ವಾನಗಳ ಉತ್ಸವ ಆಯೋಜನೆಯನ್ನು ಇಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದರು. ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಣಿಗಳು ಹಾಗೂ ಮಾನವ ಸಂಘರ್ಷ ಕಡಿಮೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಿದ್ದು, ಪ್ರತಿ ವಾರ್ಡ್ ಗಳಲ್ಲಿ ನಿರಂತರವಾಗಿ ಪ್ರತಿ ದಿನ ಒಂದು ಬಾರಿ ಆಹಾರವನ್ನು ನೀಡುವ ಯೋಜನೆ ಹೊಂದಿದೆ ಬಿಬಿಎಂಪಿ.
PublicNext
17/10/2024 12:11 pm