ತುಮಕೂರು: ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪುಂಡರ ಹಾವಳಿ ದಿನೇ ದಿನೇ ಹೆಚ್ಚುತ್ತಿದೆ. ತಲ್ವಾರ್ ನಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡು ಪುಂಡರು ಹುಚ್ಚಾಟ ಮೆರೆದಿದ್ದಾರೆ.
ಗುಬ್ಬಿ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಶಾರುಖ್, ಮುಗಲ್ ಪಾಷ ಎಂಬ ಯುವಕರು ಕೇಕ್ ಮೇಲೆ ಬಾಸ್ ಎಂದು ಬರೆಸಿ ರಸ್ತೆ ಮಧ್ಯದಲ್ಲಿ ತಲ್ವಾರ್ ಹಿಡಿದು ಕೇಕ್ ಕತ್ತರಿಸಿ ಪಟಾಕಿ ಸಿಡಿಸಿ ಹುಚ್ಚಾಟ ಮಾಡಿದ್ದಾರೆ. ತಲ್ವಾರ್ನಲ್ಲಿ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಕೂಡ ಪುಂಡರು ವಿಡಿಯೋ ಹಾಕಿಕೊಂಡಿದ್ದಾರೆ.
ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಸಿಕೊಂಡಿರುವುದು ಜನರಲ್ಲಿ ಭೀತಿ ಹುಟ್ಟಿಸಿದ್ದು, ಪೊಲೀಸ್ ವ್ಯವಸ್ಥೆಯ ವಿರುದ್ದ ಪ್ರಜ್ಞಾವಂತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
17/10/2024 01:36 pm