ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ : ಪ್ರತಿಭಟನೆಗೆ ಇಳಿದ ಬಾಲಕನ ಸಂಬಂಧಿಕರು ಸ್ಥಳೀಯರು

ಹಾವೇರಿ : ಕಾಲುವೆಯಲ್ಲಿ ಬಾಲಕ ಕೊಚ್ಚಿ ಹೋದ ಪ್ರಕರಣ ಖಂಡಿಸಿ ಸ್ಥಳೀಯರು ಹಾಗೂ ಕುಟುಂಬದ ಸದಸ್ಯರು ಶಿವಾಜಿನಗರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಶಿವಾಜಿ ನಗರದ 1 ನೇ ಕ್ರಾಸ್ ನಲ್ಲಿ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಕಾಲುವೆ ಒತ್ತುವರಿ ಹಾಗೂ ದುರಸ್ತಿ ಸರಿಯಾಗಿಲ್ಲ ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದರು. ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ ಸ್ಥಳೀಯರನ್ನ ಪೊಲೀಸರು ‌ಮನವೊಲಿಸಲು ಮುಂದಾದರು ಸ್ಥಳೀಯರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಬರಬೇಕು ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಪಟ್ಟುಹಿಡಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.

Edited By : Vinayak Patil
Kshetra Samachara

Kshetra Samachara

17/10/2024 02:52 pm

Cinque Terre

32.86 K

Cinque Terre

0

ಸಂಬಂಧಿತ ಸುದ್ದಿ