ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಹಿಂದುತ್ವದ ಯುವಕರಿಂದ 1ಲಕ್ಷ ಬಿಲ್ಲವ ಹೆಣ್ಣುಮಕ್ಕಳು ವೇಶ್ಯೆಯರಾಗಿದ್ದಾರೆ - ಅರಣ್ಯಾಧಿಕಾರಿ ವಿವಾದಾತ್ಮಕ ಹೇಳಿಕೆ

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಹಿಂದುತ್ವದ ಯುವಕರಿಂದ ಬಿಲ್ಲವ ಸಮಾಜದ 1ಲಕ್ಷದಷ್ಟು ಹೆಣ್ಣು ಮಕ್ಕಳು ವೇಶ್ಯೆಯರಾಗಿದ್ದಾರೆ ಎಂದು ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಎಂಬವರ ವಿವಾದಾತ್ಮಕ ಹೇಳಿಕೆಯ ಆಡಿಯೋ ವೈರಲ್ ಆಗಿದೆ.

ಈ ವಿವಾದಾತ್ಮಕ ಆಡಿಯೋ ಕರಾವಳಿಯಲ್ಲಿ ಭಾರೀ ವಿವಾದವನ್ನು ಸೃಷ್ಟಿಸಿದೆ. ಈ ಆಡಿಯೋ ವೈರಲ್ ಆದ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆಯಿಂದ ಬೆಳ್ಳಾರೆ ಠಾಣೆ ಸೇರಿ ಎರಡು ಕಡೆ ದೂರು ದಾಖಲಾಗಿದೆ. ಜೊತೆಗೆ ಮಂಗಳೂರು ಅರಣ್ಯಾಧಿಕಾರಿ ಮರಿಯಪ್ಪ ಆ್ಯಂಟನಿ ಅವರಿಗೂ ದೂರು ನೀಡಲಾಗಿದೆ.

ಎರಡು ದಿನಗಳ ಹಿಂದೆ ಸಂಜೀವ ಪೂಜಾರಿ ಕಾಣಿಯೂರು ಅವರು ತಮ್ಮ ಎಫ್‌ಬಿಯಲ್ಲಿ‌ "ನಾನು ಕಂಡಂತೆ ತಕ್ಷಣಕ್ಕೆ ಸಹಾಯ ಮಾಡುವುದರಲ್ಲಿ ಮುಸಲ್ಮಾನರದ್ದು ಎತ್ತಿದ ಕೈ'' ಪೋಸ್ಟ್ ಹಾಕಿದ್ದರು. ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತ ಸಂಜೀವ ಪೂಜಾರಿಯರಿಗೆ ದೂರವಾಣಿ ಕರೆ ಮಾಡಿ ಈ ಪೋಸ್ಟ್ ಬಗ್ಗೆ ಆಕ್ಷೇಪ ಎತ್ತಿದ್ದರು. ಈ ಸಂಭಾಷಣೆ ವೇಳೆ ಸಂಜೀವ ಪೂಜಾರಿಯವರು ಬಿಲ್ಲವ ಸಮಾಜದ ಹೆಣ್ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. "ದ.ಕ.ಜಿಲ್ಲೆಯಲ್ಲಿ 1ಲಕ್ಷ ಬಿಲ್ಲವ ಹುಡುಗಿಯರು ಸೂಳೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿದೆ. ಹಿಂದುತ್ವದ ಹುಡುಗರು ಭಜನೆ ಮಾಡಿ ರಾತ್ರೆ ಮರದಡಿ ಹುಡುಗಿಯರನ್ನು ಮಲಗಿಸುತ್ತಾರೆ." ತುಳುವಿನಲ್ಲಿ ಮಾತನಾಡಿರುವ ಆಡಿಯೋ ಈಗ ಭಾರೀ ವೈರಲ್ ಆಗುತ್ತಿದೆ.

Edited By : Suman K
PublicNext

PublicNext

17/10/2024 03:44 pm

Cinque Terre

27.29 K

Cinque Terre

5

ಸಂಬಂಧಿತ ಸುದ್ದಿ