ಉಡುಪಿ: ಇನ್ನು 4 ದಿನಗಳಲ್ಲಿ ವಿಧಾನಪರಿಷತ್ ಉಪಚುನಾವಣೆ ನಡೆಯಲಿದ್ದು, ಪಕ್ಷ ನನ್ನ ಮೇಲೆ ವಿಶ್ವಾಸ ಇಟ್ಟು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಈ ಸ್ಥಾನ ಗೆಲ್ಲುವ ಮೂಲಕ ರಾಜ್ಯಕ್ಕೆ ಸ್ಪಷ್ಟ ಸಂದೇಶ ರವಾನೆ ಮಾಡುತ್ತೇವೆ ಎಂದು ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಹಿತ ಕರಾವಳಿಯ ಸಂಸದರು, ಶಾಸಕರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದು ಗ್ರಾಮ ಪಂಚಾಯತ್ ಸದಸ್ಯರನ್ನು ಭೇಟಿಯಾಗಿ ಮತಯಾಚನೆ ಮಾಡುತ್ತಿದ್ದೇವೆ. ಈಗಾಗಲೇ ಉಭಯ ಜಿಲ್ಲೆಗಳ 6 ಸಾವಿರದಷ್ಟು ಮತದಾರರನ್ನು ಸಂಪರ್ಕಿಸಿದ್ದೇವೆ. ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ ರಾಜ್ಯದ ಜನತೆಗೆ ಸ್ಪಷ್ಟ ಸಂದೇಶ ನೀಡಲಿದ್ದೇವೆ ಎಂದು ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
PublicNext
17/10/2024 05:28 pm