ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ : 'ವಾಲ್ಮೀಕಿ ಮಹರ್ಷಿ ಆದರ್ಶಗಳನ್ನ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು'

ಚಳ್ಳಕೆರೆ : ಮಹರ್ಷಿ ವಾಲ್ಮೀಕಿ ಆಶೀರ್ವಾದ ನಾಯಕ ಸಮುದಾಯದ ಮೇಲೆ ಇರಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ.

ತಾಲ್ಲೂಕಿನ ಪಟ್ಟಣದ ಹಟ್ಟಿ ಮಲ್ಲಪ್ಪ ನಾಯಕ ಸಂಘ ಹಾಗೂ ಹೋಬಳಿಯ ನಾಯಕ ಸಮುದಾಯದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆಯಲ್ಲಿ ಪಾಲ್ಗೊಂಡು ಮಹಾಋಷಿ ವಾಲ್ಮೀಕಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ, ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಾಟೀಲ್ ಜಿ.ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು, ನಿರ್ದೇಶಕರಾದ ಎಸ್ ಓಬಯ್ಯ, ಮಲ್ಲೂರಹಟ್ಟಿ ಗೌಡ್ರು ತಿಪ್ಪೇಸ್ವಾಮಿ, ಇದ್ದರು.

Edited By : PublicNext Desk
Kshetra Samachara

Kshetra Samachara

17/10/2024 08:10 pm

Cinque Terre

580

Cinque Terre

0

ಸಂಬಂಧಿತ ಸುದ್ದಿ