ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಮಾನವೀಯ ಮೌಲ್ಯಗಳನ್ನ ಸಾರಿದ ಮಹಾನ್‍ಚೇತನ ವಾಲ್ಮೀಕಿ ಮಹರ್ಷಿ - ಎಸ್‍ಪಿ ಕೆ.ಎಂ. ಶಾಂತರಾಜು

ಕೋಲಾರ : ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಎಸ್‍ಪಿ ಕೆ.ಎಂ. ಶಾಂತರಾಜು ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮ‌ನ ಸಲ್ಲಿಸಿ ಮಾತನಾಡಿದರು, ಮಹರ್ಷಿ ವಾಲ್ಮೀಕಿ ರಾಮಾಯಣದಲ್ಲಿ ಬರೆದಿರುವ ಮೌಲ್ಯಗಳನ್ನ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು.

ಭಾರತೀಯ ಸಂಸ್ಕೃತಿಯನ್ನು ಇಂದಿಗೂ ಉಳಿಸಿ ವಿಶ್ವಕ್ಕೆ ಮಾನವೀಯ ಮೌಲ್ಯಗಳನ್ನ ಸಾರಿದ ಮಹಾನ್‍ಚೇತನ ವಾಲ್ಮೀಕಿ ಮಹರ್ಷಿಗಳು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಡಿವೈಎಸ್‍ಪಿ ಎಸ್.ಪಾಂಡುರಂಗ, ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಶಾಖಾಧೀಕ್ಷಕಿ ಎ.ನಜೀಮಾಬಾನು, ಆಪ್ತ ಸಹಾಯಕಿ ಜಿ.ಮಮತಾ, ಪೊಲೀಸ್ ನಿರೀಕ್ಷಕರಾದ ಆರ್.ದಯಾನಂದ, ಮಂಜುನಾಥ, ಲಕ್ಷ್ಮೀನಾರಾಯಣ, ಪಿ.ಎಸ್.ಐ. ನಾಗಪ್ಪ ಮಲ್ಲಪ್ಪ ಖಾನಾಪೂರ, ಸಂಪತ್, ಸೇರಿದಂತೆ ಜಿಲ್ಲೆಯ ಎಲ್ಲಾ ಪಿಎಸ್‍ಐಗಳು, ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಲಿಪಿಕ ಸಿಬ್ಬಂದಿ ಹಾಜರಿದ್ದರು.

Edited By : Abhishek Kamoji
Kshetra Samachara

Kshetra Samachara

17/10/2024 09:08 pm

Cinque Terre

840

Cinque Terre

0

ಸಂಬಂಧಿತ ಸುದ್ದಿ