ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ : ಚರಂಡಿಗೆ ಬಿದ್ದು, ಬಾಲಕ ಸಾವು - ಇಬ್ಬರು ಅಧಿಕಾರಿಗಳ ಅಮಾನತು

ಹಾವೇರಿ: ಚರಂಡಿ ಕಾಲುವೆಗೆ ಬಿದ್ದು ಬಾಲಕ ನಿವೇದನ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ನಗರಸಭೆ ಪೌರಾಯುಕ್ತ ಮತ್ತು ಕಿರಿಯ ಆರೋಗ್ಯ ನಿರೀಕ್ಷಕ ಅಮಾನತಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮೌಖಿಕ ಆದೇಶದ ಮೇಲೆ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಅಮಾನತು ಮಾಡಿದ್ದಾರೆ.

ಚರಂಡಿ ಕಾಲುವೆ ಮೇಲಿನ ಕಲ್ಲು ಮುಚ್ಚದೇ ನಿರ್ಲಕ್ಷ್ಯವಹಿಸಿದ ಕಾರಣ ತೆರೆದ ಚರಂಡಿ ಕಾಲುವೆಗೆ ನಿವೇದನ್ ಬಿದ್ದು ಮೃತಪಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ.

ನಗರಸಭೆ ಪೌರಾಯುಕ್ತ ಪರಶುರಾಮ್ ಎಮ್ ಛಲವಾದಿ ಮತ್ತು ಕಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಆರ್ ಮುಂಜೋಜಿ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಿ, ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.

Edited By : Manjunath H D
PublicNext

PublicNext

17/10/2024 09:19 pm

Cinque Terre

38.5 K

Cinque Terre

1

ಸಂಬಂಧಿತ ಸುದ್ದಿ