ಚಿತ್ತದುರ್ಗ : ಭಾರೀ ಮಳೆಗೆ ತಾಲ್ಲೂಕಿನ ಹಿರೇಗುಂಟನೂರು ಹೋಬಳಿ ಈಚಲನಾಗೇನಹಳ್ಳಿ ಗ್ರಾಮದಲ್ಲಿ ಅವಾಂತರವೇ ಸೃಷ್ಠಿಯಾಗಿದೆ.. ಮಳೆಗೆ ಮನೆ ಬಿದ್ದ ಪರಿಣಾಮ ರಂಗಮ್ಮ ಎಂಬಾಖೆ ಮಹಿಳೆ ಮೃತಪಟ್ಟಿದ್ದಾರೆ.. ಇನ್ನು ಸ್ಥಳಕ್ಕೆ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಸುಮಾರು 63 ವರ್ಷ ವಯಸ್ಸಿನವರಾಗಿದ್ದು, ಇಬ್ಬರು ಹೆಣ್ಣು,ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿದ ಶಾಸಕ ವೀರೇಂದ್ರ ಪಪ್ಪಿರವರು ಪರಿಹಾರದ ಭರವಸೆ ನೀಡಿದ್ದಾರೆ.
ಅಲ್ಲದೇ ಕೇಂದ್ರ ಸರ್ಕಾರದ ಎಸ್.ಡಿ.ಆರ್.ಎಫ್/ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಪ್ರಕೃತಿ ವಿಕೋಪದಿಂದಾಗಿ ಜೀವ ಹಾನಿಯಾದಂತಹ ಸಂದರ್ಭದಲ್ಲಿ ಸದರಿ ಮೃತರ ವಾರಸುದಾರರಿಗೆ ರೂ.4.00 ಲಕ್ಷಗಳನ್ನು ಪಾವತಿ ಮಾಡುವಂತೆ ಆದೇಶಿಸಿದ್ದಾರೆ. ಇನ್ನು ಹೆಚ್ಚುವರಿಯಾಗಿ ರೂ.1.00 ಲಕ್ಷಗಳನ್ನು ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದಾರೆ.
Kshetra Samachara
17/10/2024 09:25 pm