ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತ್ರಾಸಿ: ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದು ಎತ್ತು ಸಾವು- ಸಂಚಾರ ಸಮಸ್ಯೆಗೆ ಸಾರ್ವಜನಿಕರ ಆಕ್ರೋಶ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಸಮೀಪದ‌ ಮೊವಾಡಿಯಲ್ಲಿ ಕಾರು ಡಿಕ್ಕಿಯಾಗಿ ಎತ್ತು ಮೃತಪಟ್ಟ ಘಟನೆ ಗುರುವಾರ ಸಂಜೆ 7.30ರ ಸುಮಾರಿಗೆ ಸಂಭವಿಸಿದೆ.

ಉಡುಪಿ ಮೂಲದ ಬಾಡಿಗೆ ಕಾರಿನಲ್ಲಿ ಮುರುಡೇಶ್ವರಕ್ಕೆ ಹೋಗಿ ಮರವಂತೆ ಬೀಚ್ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅಪಘಾತ ಘಟಿಸಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚತುಷ್ಪಥ ರಸ್ತೆಯಿದ್ದು, ತ್ರಾಸಿಯಿಂದ ಮುಳ್ಳಿಕಟ್ಟೆಯ ವರೆಗೂ ಬೀದಿದೀಪ ಇಲ್ಲದೇ ಇರುವುದರಿಂದ ವಾಹನ ಚಾಲಕರಿಗೆ ಸಮಸ್ಯೆ ಉಂಟಾಗುತ್ತಿದೆ. ಅಲ್ಲದೇ ರಸ್ತೆ ಮಧ್ಯೆ ದಟ್ಟವಾದ ಹುಲ್ಲು ಕಳೆಗಳು‌ ಬೆಳೆದಿರುವುದರಿಂದ ಜಾನುವಾರುಗಳು ಮೇಯಲು ಹೆದ್ದಾರಿಯಲ್ಲಿ ಸಂಚರಿಸುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Edited By : Manjunath H D
Kshetra Samachara

Kshetra Samachara

17/10/2024 10:19 pm

Cinque Terre

2.56 K

Cinque Terre

0

ಸಂಬಂಧಿತ ಸುದ್ದಿ