ಬೆಂಗಳೂರು : ರಾಜ್ಯ ಮಹಿಳಾ ಕಾಂಗ್ರೆಸ್ಗೆ ನೂತನ ಸಾರಥಿಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಸಮ್ಮುಖದಲ್ಲಿ ಅಧಿಕಾರ ಸೌಮ್ಯ ರೆಡ್ಡಿ ಸ್ವೀಕರಿಸಿದ್ದಾರೆ.
ಸಮಾರಂಭದಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ, ಮಾಜಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಹ್ಯಾರಿಸ್, ಅಲ್ಲಂ ಪ್ರಭು ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯ ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಯುವ ಕಾಂಗ್ರಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಭಾಗವಹಿಸಿದ್ದರು.
PublicNext
17/10/2024 10:48 pm