ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ರಾಷ್ಟ್ರಪತಿ ಡಾ, ಎಪಿಜೆ ಅಬ್ದುಲ್ ಕಲಾಂ ಜನ್ಮ ದಿನಾಚರಣೆ

ಹೊಳಲ್ಕೆರೆ : ಪಟ್ಟಣದ ತಾಲೂಕು ಕನ್ನಡ ಭವನದಲ್ಲಿ ಮಾಜಿ ರಾಷ್ಟ್ರಪತಿ ಡಾ,ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆ ಹಾಗೂ ದುಮ್ಮಿ ಗೊಲ್ಲರಹಟ್ಟಿ ಗ್ರಾಮದ ಡಿಸಿ. ಅಖಿಲೇಶ್ ಯಾದವರ ಹುಟ್ಟುಹಬ್ಬ ಆಚರಿಸಲಾಯಿತು ಈ ಸಂದರ್ಭದಲ್ಲಿ ಹೊಳಲ್ಕೆರೆ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾನಿಲಯದ ಸುಮಿತ್ರಕ್ಕನವರು ಮಾತನಾಡಿ ,ಡಿಸಿ ಅಖಿಲೇಶ್ ಯಾದವರು ಹುಟ್ಟುಹಬ್ಬವನ್ನು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದರು ಮಾಜಿ ರಾಷ್ಟ್ರಪತಿಗಳಾದಂತಹ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಆದರ್ಶ ತತ್ವಗಳನ್ನು ಅವರ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಅವರು ಈ ದೇಶ ಕಂಡಂತಹ ಮಹಾವಿಜ್ಞಾನಿ ತತ್ವಜ್ಞಾನಿ ಮಕ್ಕಳೆಂದರೆ ತುಂಬಾ ಇಷ್ಟಪಡುತ್ತಿದ್ದರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷರಾದ ಆವಿನಹಟ್ಟಿ ಮೋಹನ್ ನಾಗರಾಜ್ ಮಾತನಾಡಿ ಅಕ್ಟೋಬರ್ ತಿಂಗಳಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತಿ ಡಾ, ಎಪಿಜೆ ಅಬ್ದುಲ್ ಕಲಾಂ ಅವರ ಜಯಂತಿ ಮಹರ್ಷಿ ವಾಲ್ಮೀಕಿ ಜಯಂತಿ ಮಹನೀಯರು ಹುಟ್ಟಿದ ತಿಂಗಳಲ್ಲಿ ಅಖಿಲ್ ಯಾದವ್ ಹುಟ್ಟುಹಬ್ಬ ಬಂದಿರುವುದು ಸಂತೋಷದ ವಿಚಾರ ಎಂದರು.

Edited By : PublicNext Desk
Kshetra Samachara

Kshetra Samachara

18/10/2024 09:43 am

Cinque Terre

540

Cinque Terre

0

ಸಂಬಂಧಿತ ಸುದ್ದಿ