ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

 ಯಲ್ಲಾಪುರ : ದತ್ತಮಂದಿರದಲ್ಲಿ ನಿಧಿಕುಂಭ ಸಮರ್ಪಣೆಗೆ ಆರ್.ವಿ.ದೇಶಪಾಂಡೆ ಚಾಲನೆ

ಯಲ್ಲಾಪುರ : ಪಟ್ಟಣದ ನಾಯಕನಕೆರೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶಿಲಾಮಯ ದತ್ತಮಂದಿರದಲ್ಲಿ ನಿಧಿಕುಂಭ ಸಮರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇವಾಲಯಗಳು ಮನುಷ್ಯನ ಏಳ್ಗೆಗೆ ಕಾರಣವಾಗುತ್ತವೆ. ಧರ್ಮಶೃದ್ಧೆಯಿಂದ ದೇವಾಲಯಗಳ ಅಭಿವೃದ್ಧಿಗೆ ನಾವೆಲ್ಲರೂ ಸಹಕರಿಸಬೇಕು ಎಂದರು.

ದೇವಾಲಯ ನಿರ್ಮಾಣ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಪ್ರಮುಖರಾದ ಜ್ಯೋತಿಷಿ ನಾಗೇಂದ್ರ ಭಟ್ಟ ಹಿತ್ಲಳ್ಲಿ, ಪ್ರಮೋದ ಹೆಗಡೆ, ಮಹೇಶ ಚಟ್ನಳ್ಳಿ ಮುಂತಾದವರು ಇದ್ದರು.

Edited By : PublicNext Desk
Kshetra Samachara

Kshetra Samachara

18/10/2024 10:15 am

Cinque Terre

2.66 K

Cinque Terre

0

ಸಂಬಂಧಿತ ಸುದ್ದಿ