ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಗೋಡೆ ಕುಸಿದು ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಶಾಸಕ ಕೆ ಸಿ ವೀರೇಂದ್ರ ಪಪ್ಪಿ

ಚಿತ್ರದುರ್ಗ: ಕಳೆದ ನಾಲ್ಕೈದು ದಿನಗಳಿಂದ ಚಿತ್ರದುರ್ಗ ಜಿಲ್ಲೆ ಇದೆ ಅಂತ ಎಡೆಬಿಡದ ಸುರಿತ್ತಿರುವ ಮಳೆಯಿಂದಾಗಿ ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ಈಚಲನಾಗೇನಹಳ್ಳಿ ಗ್ರಾಮದಲ್ಲಿ ಮನೆ ಬಿದ್ದು ಓರ್ವ ಮಹಿಳೆ ಮೃತ ಪಟ್ಟಿದ್ದು ಸ್ಥಳಕ್ಕೆ ಶಾಸಕರಾದ ಕೆ‌.ಸಿ ವೀರೇಂದ್ರ ಪಪ್ಪಿ ರವರು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಮೃತ ಮಹಿಳೆ ಈಚಲನಾಗೇನಹಳ್ಳಿ ಗ್ರಾಮದ ರಂಗಮ್ಮ (63) ವರ್ಷ ವಯಸ್ಸಿನವರಾಗಿದ್ದಾರೆ. ಮೃತ ಮಹಿಳೆ ತನ್ನ ಮಗನೊಂದಿಗೆ ಮನೆಯಲ್ಲಿ ವಾಸವಾಗಿದ್ದು ತನ್ನ ಮಗ ಕೆಲಸಕ್ಕೆ ತೆರಳಿದ್ದು ತಾನು ಮನೆಯಲಿದ್ದ ಸಂದರ್ಭದಲ್ಲಿ ಮನೆಯ ಗೋಡೆ ಮತ್ತು ಚಾವಡಿ ಕುಸಿದು ಬಿದ್ದು ಸಾವನ್ನಿಪ್ಪಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆಸಿ ವೀರೇಂದ್ರ ಪಪ್ಪಿ ರವರು ಈ ಕೂಡಲೇ ಮೃತರ ಕುಟುಂಬದವರಿಗೆ ಪರಿಹಾರ ನೀಡಬೇಕೆಂದು ತಹಶೀಲ್ದಾರರಿಗೆ ಸೂಚಿಸಿ ಕೇಂದ್ರ ಸರ್ಕಾರದ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಮೃತರ ವಾರಸುದಾರರಿಗೆ ರೂ.4 ಲಕ್ಷಗಳನ್ನು ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ರೂ.1 ಲಕ್ಷಗಳನ್ನು ಬಿಡುಗಡೆ ಮಾಡುವಂತೆ ಆದೇಶಿಸಿ ಒಟ್ಟು ರೂ.5 ಲಕ್ಷಗಳನ್ನು ಶಾಸಕ ಕುಟುಂಬಸ್ಥರಿಗೆ ನೀಡಿದ್ದಾರೆ.

Edited By : Shivu K
PublicNext

PublicNext

18/10/2024 11:08 am

Cinque Terre

14.19 K

Cinque Terre

0

ಸಂಬಂಧಿತ ಸುದ್ದಿ