ದಾವಣಗೆರೆ: ಕಳೆದೆರಡು ದಿನಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮಳೆಯಿಂದ ನೂರಾರು ಮನೆಗಳು ಮತ್ತು ರಸ್ತೆಗಳು ಜಲಾವೃತ ಆಗಿದ್ದು ಓನಜೀವನ ಅಸ್ತವ್ಯಸ್ತ ಆಗಿದೆ.
ಇನ್ನೂ ಹರಿಹರ ಪಟ್ಟಣದ ಭೀಮ್ ನಗರದಲ್ಲಿ ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ ಐದು ವರ್ಷದ ಬಾಲಕಿ ಆಹೀಸಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಬಾಲಕಿ ಆಹೀಷಾಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಮಗು ಆರೋಗ್ಯ ಸ್ಥಿತಿ ವಿಚಾರಿಸಿದರು ಹಾಗೂ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು. ಬಾಲಕಿ ಆಯೇಷಾ ಕುಟುಂಬದವರಿಗೆ ಧೈರ್ಯ ತುಂಬಿ ಬಾಲಕಿಗೆ ಉತ್ತಮ ಚಿಕಿತ್ಸೆಯ ಭರವಸೆ ನೀಡಿದರು.
Kshetra Samachara
18/10/2024 01:50 pm