ಹುಬ್ಬಳ್ಳಿ: ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಪಕ್ಷ ನನಗೆ ಶಿಗ್ಗಾಂವಿ ಕ್ಷೇತ್ರದ ವಿಚಾರವಾಗಿ ಮಾಹಿತಿ ಕೇಳಿದ್ರು. ನಾನು ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ ಕುಟುಂಬಕ್ಕೆ ಅವಕಾಶ ಕೊಡಬೇಕು ಅನ್ನೋ ಕೂಗಿದೆ. ನನಗಿರೋ ಮಾಹಿತಿ ಪ್ರಕಾರ ಬೊಮ್ಮಾಯಿ ಅವರನ್ನು ದೆಹಲಿಗೆ ಕರೆದಿದ್ದಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಬೊಮ್ಮಾಯಿ ಪರ ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಬ್ಯಾಟಿಂಗ್ ಮಾಡಿದರು.
ಮಾಧ್ಯಮಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಮುರಗೇಶ ನಿರಾಣಿ ಟಿಕೆಟ್ ವಿಚಾರವಾಗಿ ನಿನ್ನೆ ಮಾತಾಡಿದ್ದಾರೆ. ಹಿಂದೆ ಅವರು ಟಿಕೆಟ್ ಪ್ರಯತ್ನ ಮಾಡಿದ್ದು ನಿಜ. ಬೇರೆ ಉತ್ತಮ ಅಭ್ಯರ್ಥಿಗಳು ಇದ್ದಾರೆ, ಆದ್ರೆ ಜನರ ಅಪೇಕ್ಷೆ ಕುಟುಂಬದ ಪರವಾಗಿದೆ.
ಕೊನೆಗೆ ಹೈಕಮಾಂಡ್ ತೀರ್ಮಾನ ಎಲ್ಲರೂ ಒಪ್ಪಬೇಕು. ಗೆಲ್ಲೋ ಸೂಕ್ತ ಅಭ್ಯರ್ಥಿ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಕೂಡಾ ಎಲ್ಲ ಆಯಾಮಗಳಲ್ಲಿ ಸರ್ವೆ ಮಾಡಿದೆ. ಕೋರ್ ಕಮಿಟಿಯಿಂದ ಮೂರ್ನಾಲ್ಕು ಹೆಸರು ಹೋಗಿರೋ ಮಾಹಿತಿ ಇದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/10/2024 02:13 pm