ಮಂಗಳೂರು: ಗಡಿಭಾಗದ ಕಾಸರಗೋಡು ಜಿಲ್ಲೆಯ ಪಡನ್ನ ಆಯಿತ್ತಲ ಸಮುದ್ರದಲ್ಲಿ ಬೋಟ್ ದುರಂತದಲ್ಲಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪೂಂಜಾವಿ ತೀರದಲ್ಲಿ ಪತ್ತೆಯಾಗಿದೆ.
ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ ನಾಪತ್ತೆಯಾಗಿದ್ದ ಮುಜೀಬ್ರ ಮೃತ ದೇಹ ಸಂಜೆ ಪತ್ತೆಯಾಗಿದೆ. ನೌಕಾಪಡೆ, ಕರಾವಳಿ ಪೊಲೀಸ್, ಮೀನು ಗಾರರು ಶೋಧ ನಡೆಸಿದ್ದರು. ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್, ಎಂ.ರಾಜ ಗೋಪಾಲ್, ಜಿಲ್ಲಾ ಪೊಲೀಸ್ ಮುಖ್ಯಸ್ಥೆ ಡಿ.ಶಿಲ್ಪಾ ನೇತತ್ವ ನೀಡಿದರು ದುರಂತದಲ್ಲಿ ಮೃತಪಟ್ಟ ಅಬೂಬಕರ್ ಮೃತದೇಹ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು. ದುರಂತಕ್ಕೀಡಾದ ಫೈಬರ್ ಬೋಟ್ ಅರ್ಧಭಾಗ ಆಯಿತ್ತಲ ಸಮೀಪದ ಕಡಲ ಕಿನಾರೆಯಲ್ಲಿ ಗುರುವಾರ ಪತ್ತೆಯಾಗಿದೆ. ಬುಧವಾರ ಮಧ್ಯಾಹ್ನ ಆಯಿತ್ತಲ ಸಮುದ್ರದಲ್ಲಿ ಫೈಬರ್ ಬೋಟ್ ದುರಂತಕ್ಕೀಡಾಗಿತ್ತು. ದೋಣಿಯಲ್ಲಿದ್ದ 37 ಮಂದಿಯಲ್ಲಿ 35 ಮಂದಿಯನ್ನು ರಕ್ಷಿಸಲಾಗಿತ್ತು.
Kshetra Samachara
18/10/2024 03:23 pm