ಕೊಡಗು: ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದವತಿಯಿಂದ 14 ನೇ ವರ್ಷದ ಕಾವೇರಿ ಪ್ರತಿಮೆಗೆ ಪೂಜೆ ಹಾಗು ಕಾವೇರಿ ಪವಿತ್ರ ತೀರ್ಥವಿತರಣೆ ನೆರವೇರಿತು.
ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವನಂತರ ಸಂಜೆ ಚೆಟ್ಟಳ್ಳಿ ಸಹಕಾರ ಸಂಘದ ಮುಂದಿರುವ ಕಾವೇರಿ ಪ್ರತಿಮೆಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಣೆ ಹಾಗು ತೀರ್ಥವಿತರಿಸಲಾಯಿತು. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ ಕಳೆದ 14 ವರ್ಷಗಳ ಹಿಂದೆ ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಕಾವೇರಿ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ನಂತರದಲ್ಲಿ ಪ್ರತೀ ವರ್ಷ ಕಾವೇರಿ ಸಂಕ್ರಮಣದಂದು ಕಾವೇರಿ ತೀರ್ಥವನ್ನು ವಿತರಿಸಲಾಗುತ್ತಿದೆ. ಇಂತಹ ದೈವೀ ಕಾರ್ಯವನ್ನು ಮಾಡುವ ಮೂಲಕ ಸಂಘವು ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು. ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.
PublicNext
18/10/2024 04:38 pm