ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ- ಮೆರವಣಿಗೆ ವೈಭವ

ಚಿತ್ರದುರ್ಗ: ಅಕ್ಟೋಬರ್ 18ರಂದು ಮಧ್ಯಾಹ್ನ 2 ಗಂಟೆಗೆ ನಾಯಕನಹಟ್ಟಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿಯಾಗಿ ಜರುಗಿದೆ. ಪಟ್ಟಣದ ಹಟ್ಟಿ ಮಲ್ಲಪ್ಪ ನಾಯಕ ಸಂಘ ಹಾಗೂ ಹೋಬಳಿ ಮಟ್ಟದ ನಾಯಕ ಸಮುದಾಯದ ನೇತೃತ್ವದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಅತ್ಯಧಿಕ ನಾಯಕ ಸಮುದಾಯ ಇರುವ ಮೊಳಕಾಲ್ಮೂರು ಕ್ಷೇತ್ರದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡುತ್ತಿದ್ದು ಖುಷಿಯ ವಿಚಾರ. ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಮಾಡುವ ಮೂಲಕ ನಮ್ಮ ಜನತೆ ವಾಲ್ಮೀಕಿ ಅವರನ್ನು ಆರಾಧಿಸುತ್ತಿದ್ದಾರೆ. ಮಹರ್ಷಿ ವಾಲ್ಮೀಕಿ ಆಶೀರ್ವಾದ ನಾಯಕ ಸಮುದಾಯದ ಮೇಲೆ ಸದಾ ಇರಲಿ ಎಂದರು.

ಈ ವೇಳೆ ಪಟ್ಟಣದ ತೇರು ಬೀದಿ ಸೇರಿ ಹಲವು ಕಡೆ ಭವ್ಯ ಮೆರವಣಿಗೆ ಕೂಡಾ ನಡೆಸಲಾಯಿತು. ಈ ವೇಳೆ ವಿವಿಧ ಜಾನಪದ ಕಲಾ ತಂಡಗಳು ಕೂಡಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದವು. ಈ ವೇಳೆ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿ, ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಸೇರಿ ಹಲವರಿದ್ದರು.

Edited By : Manjunath H D
PublicNext

PublicNext

18/10/2024 06:12 pm

Cinque Terre

8.44 K

Cinque Terre

0

ಸಂಬಂಧಿತ ಸುದ್ದಿ