ಯಲ್ಲಾಪುರ: ಚಲಿಸುತ್ತಿದ್ದ ಲಾರಿವೊಂದು ಹೊಂಡ ಗುಂಡಿಗಳ ರಸ್ತೆಯಲ್ಲಿ ಸ್ಕಿಡ್ ಆಗಿ ಪಲ್ಟಿಯಾಗಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ನಡೆದಿದೆ.
ಹೆದ್ದಾರಿಯಲ್ಲಿ ಬಿದ್ದಿರುವ ಭಾರೀ ಹೊಂಡವನ್ನ ತಪ್ಪಿಸಲು ಹೋಗಿ ಲಾರಿ ಹೆದ್ದಾರಿಯಲ್ಲಿಯೇ ಅಡ್ಡಲಾಗಿ ಬಿದ್ದಿದೆ. ಹೆದ್ದಾರಿಯಲ್ಲಿ ಲಾರಿ ಬಿದ್ದ ಪರಿಣಾಮವಾಗಿ ಕಿಲೋ ಮೀಟರ್ಗಳಷ್ಟು ದೂರದವರೆಗೆ ವಾಹನಗಳು ಸಾಲು ಗಟ್ಟಿ ನಿಲ್ಲುವಂತಾಗಿತ್ತು.
ಅಂಕೋಲಾ ಯಲ್ಲಾಪುರ ಹೆದ್ದಾರಿ 63ರಲ್ಲಿ ಅರಬೈಲ್ ಘಾಟ ಬಳಿ ಭಾರಿ ಪ್ರಮಾಣದಲ್ಲಿ ಹೊಂಡಗಳು ಬಿದ್ದ ಪರಿಣಾಮ ಈ ಹೆದ್ದಾರಿಯಲ್ಲಿ ನಿತ್ಯವೂ ಸಂಚರಿಸುವ ವಾಹನ ಸವಾರರು ಪರದಾಟ ನಡೆಸಲುತ್ತಲೆ ಇದ್ದಾರೆ. ಭಾರಿ ಮಳೆಯಿಂದಾಗಿ ಹೊಂಡಗಳು ಬಿದ್ದಿವೆ. ಆದರೆ ಈ ಭಾಗದಲ್ಲಿ ಹೆದ್ದಾರಿಯಲ್ಲಿ ಬಿದ್ದಿರುವ ಹೊಂಡಗಳನ್ನು ದುರಸ್ತಿ ಮಾಡದೆ, ಗಟಾರ ದುರಸ್ತಿ ಮಾಡಲಾಗುತ್ತಿದೆ. ಹೆದ್ದಾರಿಯಲ್ಲಿ ಬಿದ್ದ ಹೊಂಡಗಳನ್ನು ಮೊದಲು ದುರಸ್ತಿ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
Kshetra Samachara
18/10/2024 06:37 pm