ಹುಬ್ಬಳ್ಳಿ: ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಿಗೂ ಆದಷ್ಟು ಬೇಗ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. ನಾಡಿದ್ದು, ನಾನು ಕೂಡ ದೆಹಲಿಗೆ ತೆರಳಿಲಿದ್ದೇನೆ, ವರಿಷ್ಠರೊಂದಿಗೆ ಚರ್ಚಿಸಿ ಎರಡ್ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಯಾರಿಗೆ ಟಿಕೆಟ್ ನೀಡಬೇಕೆನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಶಿಗ್ಗಾವಿಯಲ್ಲಿ ಎಷ್ಟೇ ಆಕಾಂಕ್ಷಿಗಳಿದ್ದರೂ ಬಸವರಾಜ ಬೊಮ್ಮಾಯಿ ಮನಸ್ಸಿನಲ್ಲಿ ಏನಿದೆ ಮುಖ್ಯ. ಅಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂದು ಬೊಮ್ಮಾಯಿ ಅಭಿಪ್ರಾಯ ಪಡೆದು ಮುಂದುವರೆಯಲಾಗುವುದು ಎಂದರು.
ಚನ್ನಪಟ್ಟಣದ ಟಿಕೆಟ್ ಆಯ್ಕೆಯಲ್ಲಿ ಹೈಕಮಾಂಡ್ ಎಚ್.ಡಿ ಕುಮಾರಸ್ವಾಮಿ ಅವರ ಅಭಿಪ್ರಾಯ ಪ್ರಮುಖ ಎಂದಿದೆ. ಹೀಗಾಗಿ ಅಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/10/2024 07:47 pm