ಹುಬ್ಬಳ್ಳಿ: ಅವಳಿ ನಗರದಲ್ಲಿ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಗವಿ ಓಣಿಯಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ಮನೆಯ ಮಾಲೀಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ಸಾಯಂಕಾಲ ನಡೆದಿದೆ.
ಉತ್ತರ ವಿಭಾಗದ ಎಸಿಪಿ ಶಿವಪ್ರಕಾಶ ನಾಯ್ಕ್ ಘಟನಾ ಸ್ಥಳಕ್ಕೆ ಧಾವಿಸಿ, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆಯಲ್ಲಿ ಒಂದು ಬೈಕ್ ಕೂಡಾ ಸಂಪೂರ್ಣವಾಗಿ ಜಖಂಗೊಂಡಿದೆ.
ಮನೆ ಬಿದ್ದ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಅವಳಿ ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹಾಗೂ ಡಿಸಿಪಿ ನಂದಗಾವಿ ಆಗಮಿಸಿ ಮಳೆಯಿಂದ ಬಿದ್ದ ಮನೆಯನ್ನು ವೀಕ್ಷಣೆ ಮಾಡಿ, ಸ್ಥಳೀಯರ ಜೊತೆ ಸಮಾಲೋಚನೆ ಕೂಡಾ ನಡೆಸಿದರು. ಹುಬ್ಬಳ್ಳಿಯ ಕಮರಿಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kshetra Samachara
18/10/2024 10:47 pm